ಬಸವಣ್ಣನವರ ವಚನಗಳು ಮತ್ತು ಸಾರಾಂಶ | Basavanna Vachana Kannada PDF Summary
Hello friends, if you are searching for the ಬಸವಣ್ಣನವರ ವಚನಗಳು ಮತ್ತು ಸಾರಾಂಶ PDF / Basavanna Vachana Kannada PDF download link but you didn’t find it anywhere so don’t worry you are on the right website. Basavanna is a 12th century philosopher, social reformer, and preacher whose teachings are practiced not only in Karnataka but also in the entire country.
ಸಾಮಾಜಿಕ ಸುಧಾರಕನಾಗಿ, ಬಸವಣ್ಣ ಅವರು ಸಾಂಪ್ರದಾಯಿಕವಾದಿಗಳ ಕೈಯಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗಿತ್ತು. ಆದರೆ ಅವರ ಕಾಲದ ಇತರ ಸುಧಾರಕರೊಂದಿಗೆ, ಅವರು ವೇದಗಳ ಬೋಧನೆಗಳು ಮತ್ತು ಸಂಪ್ರದಾಯಗಳನ್ನು ಮತ್ತು ಪ್ರಾಚೀನ ಗ್ರಂಥಗಳನ್ನು ಪ್ರಶ್ನಿಸಿ ಭಾರತದ ಇತಿಹಾಸದಲ್ಲಿ ಒಂದು ಶ್ರೇಷ್ಠ ಧಾರ್ಮಿಕ ಚಳವಳಿಯನ್ನು ಪ್ರಾರಂಭಿಸಿದರು.
ಬಸವಣ್ಣನವರ ವಚನಗಳು ಮತ್ತು ಸಾರಾಂಶ PDF | Basavanna Vachana Kannada PDF
1. ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ
ಲೆಂಕ ಕಂಡಾ, ಪ್ರಾಣದಾಸೆ ಮತ್ತೇಕಯ್ಯಾ
ಭಕ್ತ ಕಂಡಾ, ತನುಮನಧನದಾಸೆ ಮತ್ತೇಕಯ್ಯಾ
ನಿಮ್ಮ ಅಂಕೆಗೆ ಝಂಕೆಗೆ ಶಂಕಿತನಾದಡೆ
ಎನ್ನ ಲೆಂಕತನಕ್ಕೆ ಹಾನಿ ಕೂಡಲಸಂಗಮದೇವಾ.
2. ಅಂಕ ಕಳನೇರಿ ಕೈಮರೆದಿರ್ದಡೆ
ಮಾರಂಕ ಬಂದಿರಿವುದ ಮಾಬನೆ
ನಿಮ್ಮ ನೆನಹ ಮನ ಮರೆದಿರ್ದಡೆ
ಮಾಯೆ ತನುವನಂಡಲೆವುದ ಮಾಬುದೆ
ಕೂಡಲಸಂಗಯ್ಯನ ನೆನೆದಡೆ,
ಪಾಪ ಉರಿಗೊಡ್ಡಿದರಗಿನಂತೆ ಕರಗುವುದಯ್ಯಾ.
3. ಅಂಕವೋಡಿದಡೆ ತೆತ್ತಿಗಂಗೆ ಭಂಗವಯ್ಯಾ,
ಕಾದಿ ಗೆಲಿಸಯ್ಯಾ ಎನ್ನನು.
ಕಾದಿ ಗೆಲಿಸಯ್ಯಾ ಕೂಡಲಸಂಗಮದೇವಯ್ಯಾ,
ಎನ್ನ ತನು ಮನ ಧನದಲ್ಲಿ ವಂಚನೆಯಿಲ್ಲದೆ.
4. ಅಂಗದ ಮೇಲಣ ಲಿಂಗ ಹಿಂಗಿ ಬಂದ ಸುಖವನಾರಿಗರ್ಪಿಸುವೆ
ಹಿಂಗಲಾಗದು, ಭಕ್ತಿಪಥಕ್ಕೆ ಸಲ್ಲದಾಗಿ,
ಹಿಂಗಲಾಗದು, ಶರಣಪಥಕ್ಕೆ ಸಲ್ಲದಾಗಿ,
ಕೂಡಲಸಂಗಮದೇವರ ಹಿಂಗಿ ನುಂಗಿದುಗುಳು ಕಿಲ್ಬಿಷ.
5. ಅಂಗದ ಮೇಲೆ ಲಿಂಗ ಆಯತವಾಗಿ
ಲಿಂಗಾರ್ಚನೆಯ ಮಾಡಿದಡೆ ಭವ ಹಿಂಗದೆಂದು,
ಪ್ರಾಣದ ಮೇಲೆ ಲಿಂಗ[ಸ್ವಾ]ಯತವ ಮಾಡಿ
ಎನ್ನಂತರಂಗ ಶುದ್ಧವ ಮಾಡಿ
ಲಿಂಗೈಕ್ಯದ ಹೊಲಬ ತೋರಿದನಯ್ಯಾ, ಚೆನ್ನಬಸವಣ್ಣನು. ಕಾಯದ ಕಳವಳವು
ದಾಸೋಹದ ಮುಖದಲ್ಲಿ ಅಲ್ಲದೆ ಹರಿಯದೆಂದು
ಜಂಗಮಮುಖಲಿಂಗವಾಗಿ ಬಂದು
ಎನ್ನ ಶಿಕ್ಷಿಸಿ ರಕ್ಷಿಸಿ
ಎನ್ನ ಸಂಸಾರದ ಪ್ರಕೃತಿಯ ಹರಿದನಯ್ಯಾ, ಪ್ರಭುದೇವರು.
ಕೂಡಲಸಂಗಮದೇವರಲ್ಲಿ
ಪ್ರಭುದೇವರ ಚೆನ್ನಬಸವಣ್ಣನ
ಕರುಣದಿಂದಲಾನು ಬದುಕಿದೆನು.
6. ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ
ಸ್ಥಾವರದೈವಕ್ಕೆರಗಲಾಗದು.
ತನ್ನ ಪುರುಷನ ಬಿಟ್ಟು ಅನ್ಯಪುರುಷನ ಸಂಗ ಸಲ್ಲುವುದೇ?
ಕರಸ್ಥಲದ ದೇವನಿದ್ದಂತೆ
ಧರೆಯ ಮೇಲಣ ಪ್ರತಿಷ್ಠೆಗೆರಗಿದಡೆ
ನರಕದಲ್ಲಿಕ್ಕುವ ಕೂಡಲಸಂಗಮದೇವ.
7. ಅಂಗದಲಳವಟ್ಟ ಲಿಂಗಕ್ಕೆ ಅಂಗವೆ ಭಾಜನ,
ಪ್ರಾಣದ ಮೇಲಣ ಲಿಂಗಕ್ಕೆ ನಿರ್ಭಾವವೆ ಭಾಜನ.
ಅರಿವಿನ ಮೇಲಣ ಲಿಂಗಕ್ಕೆ ನಿರ್ಭಾವವೆ ಭಾಜನ
ಕೂಡಲಸಂಗಮದೇವಯ್ಯಾ,
ಪ್ರಭುದೇವರು ಆರೋಗಣೆಯ ಮಾಡುವಡೆ
ಭಕ್ತಿಪರಿಯಾಣವಲ್ಲದೆ ಬೇರೆ ಭಾಜನವ ಕಾಣೆನು.
8. ಅಂಗದಲ್ಲಿ ಅರ್ಪಿತವಾದ ಸುಖವು
ಲಿಂಗದಲ್ಲಿ ಲೀಯವಾಯಿತ್ತೆಂದಡೆ
ಅಂಗವ ಲಿಂಗದಲ್ಲಿ ಮತ್ತೆ ನಿಕ್ಷೇಪಿಸಿಹೆನೆಂಬ
ಕಾರಣವೇಕಯ್ಯಾ ಶರಣಂಗೆ
ಪ್ರಾಣನ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ
ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿ ಎಂತು ಹೇಳಯ್ಯಾ ಕೂಡಲಸಂಗಮದೇವಾ,
ನಿಮ್ಮ ಶರಣರು ಕಾಯವಿಡಿದಿರ್ದು ನಿರ್ಮಾಯವಾಗಿರ್ಪುದ
ಹೇಳಯ್ಯಾ ನಿಮ್ಮ ಧರ್ಮ.
9. ಅಂಗದಲ್ಲಿ ಲಿಂಗಸಂಗ, ಲಿಂಗದಲ್ಲಿ ಅಂಗಸಂಗವ ಮಾಡಿಹೆನೆಂದಡೆ,
ಸಂದು ಭೇದವಳಿವ ಪರಿ ಎಂತು ಹೇಳಾ
ಅಂಗದಲ್ಲಿ ಸಂಗವ ಮಾಡಿಹೆನೆಂದಡೆ,
ಮುಂದುಗೆಡಿಸಿ ಕಾಡುವನು ಶಿವನು.
ಕಾಮವೆಂಬ ಬಯಕೆಯಲ್ಲಿ
ಅಳಲಿಸುವ ಬಳಲಿಸುವ ಶಿವನು.
ಲಿಂಗದಲ್ಲಿ ಅಂಗವ ತಂದು ನಿಕ್ಷೇಪಿಸಿಹೆನೆಂದಡೆ,
ಅಂಗದಿಂದ ಅತ್ತತ್ತಲೋಸರಿಸಿ ಓಡುವನಯ್ಯಾ ಶಿವನು.
ಹೆಣ್ಣು ಗಂಡಾದಡೆ ಸಂಗಕ್ಕೆ ಒಲಿವನು ಕೇಳಾ ಶಿವನು.
ಕೂಡಲಸಂಗಮದೇವರ ಬೆರಸುವಡೆ,
ಭಿನ್ನವಿಲ್ಲದೆ ಕಲಿಯಾಗಿರಬೇಕು ಕೇಳಾ ಅವ್ವಾ.
ಕಂಗಳಿಚ್ಛೆಗೆ ಪರವಧುವ ನೆರೆವರು.
ಲಿಂಗಲಾಂಛನಧಾರಿಯಾದಲ್ಲಿ ಫಲವೇನು
ಲಿಂಗಪಥವ ತಪ್ಪಿ ನಡೆವವರು
ಜಂಗಮಮುಖದಿಂದ ನಿಂದೆ ಬಂದಡೆ
ಕೊಂಡ ಮಾರಿಂಗೆ ಹೋಹುದು ತಪ್ಪದು
ಕೂಡಲಸಂಗಮದೇವಾ.
ಕಂಗಳು ಕಡೆಗೋಡಿವರಿಯುತ್ತ ಸುರಿಯುತ್ತ ಎಂದಿಪ್ಪೆನೊ
ನೋಟವೆ ಪ್ರಾಣವಾಗಿ ಎಂದಿಪ್ಪೆನೊ
ಕೂಟವೇ ಪ್ರಾಣವಾಗಿ ಎಂದಿಪ್ಪೆನೊ
ಎನ್ನ ಅಂಗವಿಕಾರದ ಸಂಗವಳಿದು,
ಕೂಡಲಸಂಗಯ್ಯಾ, ಲಿಂಗ ಲಿಂಗವೆನುತ್ತ.
ಲಿಂಗವಂತಂಗಲ್ಲದೆ ಸಾಧ್ಯವಾಗದು ನೋಡಾ.
ಏಕಲಿಂಗಪರಿಗ್ರಾಹಕನಾದ ಬಳಿಕ,
ಆ ಲಿಂಗನಿಷ್ಠೆ ಗಟ್ಟಿಗೊಂಡು,
ಸ್ವಯಲಿಂಗಾರ್ಚನೋಪಚಾರ ಅರ್ಪಿತ ಪ್ರಸಾದಭೋಗಿಯಾಗಿ,
ವೀರಶೈವಸಂಪನ್ನನೆನಿಸಿ ಲಿಂಗವಂತನಾದ ಬಳಿಕ
ತನ್ನಂಗಲಿಂಗಸಂಬಂಧಕ್ಕನ್ಯವಾದ ಜಡಭೌತಿಕ ಪ್ರತಿಷ್ಠೆಯನುಳ್ಳ
ಭವಿಶೈವದೈವಕ್ಷೇತ್ರತೀರ್ಥಂಗಳಾದಿಯಾದ ಹಲವು ಲಿಂಗಾರ್ಚನೆಯ
ಮನದಲ್ಲಿ ನೆನೆ[ಯ]ಲಿಲ್ಲ, ಮಾಡಲೆಂತೂ ಬಾರದು.
ಇಷ್ಟೂ ಗುಣವಳವಟ್ಟಿತ್ತಾದಡೆ
ಆತನೀಗ ಏಕಲಿಂಗನಿಷ್ಠಾಚಾರಯುಕ್ತನಾದ
ವೀರಮಾಹೇಶ್ವರನು.
ಇವರೊಳಗೆ ಅನುಸರಿಸಿಕೊಂಡು ನಡೆದನಾದಡೆ ಗುರುಲಿಂಗಜಂಗಮಪಾದೋದಕಪ್ರಸಾದ ಸದ್ಭಕ್ತಿಯುಕ್ತವಾದ
ವೀರಶೈವ ಷಡುಸ್ಥಲಕ್ಕೆ ಹೊರಗಾಗಿ ನರಕಕ್ಕಿಳಿವನು ಕಾಣಾ,
ಕೂಡಲಸಂಗಮದೇವಾ.
ದೇಹಗುಣಂಗಳಿಲ್ಲಾಗಿ ನಿರ್ದೆಹಪ್ರಸಾದಿ ನೋಡಯ್ಯಾ,
ಅಶನವ್ಯಸನಾದಿಗಳೆಲ್ಲವು ಬೆಂದವು ನೋಡಯ್ಯಾ.
ಈ ಎಲ್ಲ ಗುಣಂಗಳಳಿದು ಕೂಡಲಸಂಗಮದೇವರಲ್ಲಿ
ಸಾವಧಾನಿ ಪ್ರಸಾದಿ ಚೆನ್ನಬಸವಣ್ಣನು.
ಗೇಣು ಎರಡು ಕೂಡಲು ಒಂದು ಮೊಳ,
ಮೊಳವೆರಡು ಕೂಡಲು ಒಂದು ಹಸ್ತ,
ಹಸ್ತವೆರಡು ಕೂಡಲು ಒಂದು ಮಾರು,
ಮಾರೆರಡು ಕೂಡಲು ಒಂದು ಜಂಘೆ,
ಜಂಘೆ ಏಳುನೂರೆಪ್ಪತ್ತು ಕೂಡಲು ಒಂದು ಪಾದಚ್ಛಯ,
ಪಾದಚ್ಛಯವೆರಡು ಸಾವಿರದೆಂಟನೂರು ಕೂಡಲು ಒಂದು ಕೂಗಳತೆ,
ಕೂಗಳತೆ ನಾಲ್ಕು ಕೂಡಲು ಒಂದು ಹರದಾರಿ,
ಹರದಾರಿ ನಾಲ್ಕು ಕೂಡಲು ಒಂದು ಯೋಜನ,
ಅಂಥ ಯೋಜನ ನಾಲ್ಕು ಚೌಕಕ್ಕು ಹನ್ನೆರಡು ಹನ್ನೆರಡು ಕೂಡಲು
ಬಳಸಿ ನಾಲ್ವತ್ತೆಂಟು ಯೋಜನ ಪ್ರಮಾಣಿನ ಕಟ್ಟಳೆಯಾಯಿತ್ತು.
ಇಂತಪ್ಪ ಕಟ್ಟಳೆಯಾಗಿದ್ದ ಕಲ್ಯಾಣದೊಳಗಿರುವ ಗಣಂಗಳೆಲ್ಲರನೂ
ಕೂಡಲಸಂಗಯ್ಯಾ
ನಿಮ್ಮೊಳು ಕಂಡು ಸುಖಿಯಾಗಿರ್ದೆನು.
15. ಅಂಗೈ ತಿಂದುದೆನ್ನ, ಕಂಗಳು ಕೆತ್ತಿಹವಯ್ಯಾ,
ಬಂದಹರಯ್ಯಾ ಪುರಾತರೆನ್ನ ಮನೆಗೆ,
ಬಂದಹರಯ್ಯಾ ಶರಣರೆನ್ನ ಮನೆಗೆ.
ಕಂಡ ಕನಸು ದಿಟವಾಗಿ ಜಂಗಮ ಮನೆಗೆ ಬಂದರೆ,
ಶಿವಾರ್ಚನೆಯ ಮಾಡುವೆ,
ಕೂಡಲಸಂಗಮದೇವಯ್ಯಾ, ನಿಮ್ಮ ಮುಂದೆ.
Here you can download the ಬಸವಣ್ಣನವರ ವಚನಗಳು ಮತ್ತು ಸಾರಾಂಶ PDF / Basavanna Vachana Kannada PDF by click on the link given below.