Desha Bhakthi Geethegalu Kannada PDF Summary
Dear readers, today we are going to share Desha Bhakthi Geethegalu in Kannada PDF for all of you. Every year independence Day is celebrated on 15 August with great pomp. Many such Desh Bhakti songs are mostly played or heard on 15th August all over the country.
There are also many songs that are considered Desh Bhakti songs. In many schools and collages programs, Desh Bhakti songs are sung by many students and kids on the occasion of 15th August (Independence Day) and 26th January (Republic Day) during their school and college functions.
Therefore here in this article, we have provided Desha Bhakthi Geethe Lyrics in Kannada PDF for those students and kids who are preparing for any type of school and collages program to celebrate Independence Day. The given famous Desh Bhakti song will be very useful for you on this special occasion.
Desha Bhakthi Geethegalu in Kannada Lyrics PDF
ಜಯ ಭಾರತ ಜನನಿಯ…
-ಕುವೆಂಪು
ಜಯ ಭಾರತ ಜನನಿಯ ತನುಜಾತೆ ಜಯ ಹೇ! ಕರ್ನಾಟಕ ಮಾತೆ ||
ಜಯ ಸುಂದರ ನದಿವನಗಳ ನಾಡೆ ಜಯ ಹೇ! ರಸ ಋಷಿಗಳ ಬೀಡೆ
ಭೂದೇವಿಯ ಮಕುಟದ ನವಮಣಿಯೆ ಗಂಧದ ಚಂದನ ಹೊನ್ನಿನ ಗಣಿಯೆ
ರಾಘವ ಮಧುಸೂದನ-ರವತರಿಸಿದ ಭಾರತ ಜನನಿಯ ತನುಜಾತೆ
ಜನನಿಯ ಜೋಗುಳ ವೇದದ ಘೋಷ ಜನನಿಗೆ ಜೀವವು ನಿನ್ನಾವೇಶ
ಹಸುರಿನ ಗಿರಿಗಳ ಸಾಲೆ ನಿನ್ನಯ ಕೊರಳಿನ ಮಾಲೆ
ಕಪಿಲ ಪತಂಜಲ ಗೌತಮ ಜಿನನುತ ಭಾರತ ಜನನಿಯ ತನುಜಾತೆ
ಜಯ ಹೇ! ಕರ್ನಾಟಕ ಮಾತೆ
ಶಂಕರ ರಾಮಾನುಜ ವಿದ್ಯಾರಣ್ಯ ಬಸವೇಶ್ವರ ಮಧ್ವರ ದಿವ್ಯಾರಣ್ಯ
ರನ್ನ ಶಡಕ್ಷರಿ ಪೊನ್ನ ಪಂಪ ಲಕುಮಿಪತಿ ಜನ್ನ
ಕುಮಾರ ವ್ಯಾಸರ ಮಂಗಳ ಧಾಮ ಕವಿ ಕೋಗಿಲೆಗಳ ಪುಣ್ಯಾರಾಮ
ನಾನಕ ರಾಮಾನಂದ ಕಬೀರರ ಭಾರತ ಜನನಿಯ ತನುಜಾತೆ
ಜಯ ಹೇ! ಕರ್ನಾಟಕ ಮಾತೆ
ತೈಲಪ ಹೊಯ್ಸಳರಾಡಿದ ನಾಡೆ ಡಂಕಣ ಜಕಣರ ನೆಚ್ಚಿನ ಬೀಡೆ
ಕೃಷ್ಣ ಶರಾವತಿ ತುಂಗಾ ಕಾವೇರಿಯ ವರ ರಂಗ
ಚೈತನ್ಯ ಪರಮಹಂಸ ವಿವೇಕರ ಭಾರತ ಜನನಿಯ ತನುಜಾತೆ
ಜಯ ಹೇ! ಕರ್ನಾಟಕ ಮಾತೆ
ಸರ್ವ ಜನಾಂಗದ ಶಾಂತಿಯ ತೋಟ ರಸಿಕರ ಕಂಗಳ ಸೆಳೆಯುವ ನೋಟ
ಹಿಂದು ಕ್ರೈಸ್ತ ಮುಸಲ್ಮಾನ ಪಾರಸಿಕ ಜೈನರುದ್ಯಾನ
ಜನಕನ ಹೋಲುವ ದೊರೆಗಳ ಧಾಮ ಗಾಯಕ ವೈಣಿಕರಾರಾಮ
ಕನ್ನಡ ನುಡಿ ಕುಣಿದಾಡುವ ಗೇಹ ಕನ್ನಡ ತಾಯಿಯ ಮಕ್ಕಳ ದೇಹ
ಭಾರತ ಜನನಿಯ ತನುಜಾತೆ ಜಯ ಹೇ! ಕರ್ನಾಟಕ ಮಾತೆ
ರಾಷ್ಟ್ರಗೀತೆ
ಜನ ಗಣ ಮನ ಅಧಿನಾಯಕ ಜಯ ಹೇ
ಭಾರತ ಭಾಗ್ಯವಿಧಾತಾ
ಪಂಜಾಬ ಸಿಂಧು ಗುಜರಾತ ಮರಾಠಾ
ದ್ರಾವಿಡ ಉತ್ಕಲವಂಗ
ವಿಂಧ್ಯ ಹಿಮಾಚಲ ಯಮುನಾ ಗಂಗಾ
ಉತ್ಕಲ ಜಲಧಿ ತರಂಗ
ತವ ಶುಭ ನಾಮೇ ಜಾಗೇ
ಗಾಹೇ ತವ ಜಯ ಗಾಥಾ
ಜನ ಗಣ ಮಂಗಲ ದಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಜಯ ಹೇ ಜಯ ಹೇ ಜಯ ಹೇ
ಜಯ ಜಯ ಜಯ ಜಯ ಹೇ
ಝಂಡಾ ಉಂಚಾ ರಹೇ ಹಮಾರಾ
ಝಂಡಾ ಉಂಚಾ ರಹೇ ಹಮಾರಾ
ವಿಜಯೀ ವಿಶ್ವತಿರಂಗಾ ಪ್ಯಾರಾ ಝಂಡಾ
ಊಂಛಾ ರಹೇ ಹಮಾರಾ ॥ಝಂಡಾ॥
ಸದಾ ಶಕ್ತಿ ಬರ್ಸಾನೇ ವಾಲಾ
ಪ್ರೇಮ ಸುಧಾ ಸರ್ಸಾನೇ ವಾಲಾ ವೀರೋಂಕೋ ಹರ್ಷಾನೇ
ವಾಲಾ ಮಾತೃಭೂಮಿಕಾ
ತನ್ ಮನ್ ಸಾರಾ ॥ಝಂಡಾ॥
ಸ್ವತಂತ್ರತಾಕೀ ಭೀಷಣ ರಣ್ ಮೇ
ಲಗ್ಕರ್ ಬಡೇ ಜೋಷ್ ಕ್ಷಣ್ ಕ್ಷಙ್ಮೇ ಕಾವೇ ಶತ್ರು ದೇಖ್ಕರ್
ಮನ್ಮೇ ಮಿಟ್ ಜಾವೇ
ಭಯ್ ಸಂಕಟ್ ಸಾರಾ ॥ಝಂಡಾ॥
ಇನ್ ಝಂಡೇಕೇ ನೀಚೇ ನಿರ್ಭಯ್
ಲೇ ಸ್ವರಾಜ್ಯ ಯಹ ಅವಿಚಲ ನಿಶ್ಚಯ್
ಬೋಲೋ, ಭಾರತ್ ಮಾತಾಕೀ ಜಯ್
ಸ್ವತಂತ್ರತಾ ಹಿ ಧ್ಯೇಯ್ ಹಮಾರಾ ॥ಝಂಡಾ॥
ಇಸ್ ಕೀ ಶಾನ್ ನೀ ಜಾನೇ ಪಾವೇ
ಚಾಹೆ ಜಾನ್ ಭಲೇಹಿ ಜಾಯೇ
ವಿಶ್ವ ವಿಜಯ ಕರ್ ಕೇ ದಿಖ್ ಲಾವೇ
ತಬ್ ಹೂವೇ ಪ್ರಾಣ ಪೂರ್ಣ ಹಮಾರಾ ॥ಝಂಡಾ॥
ಹಿಂದೂಸ್ತಾನವು ಯೆಂದು ಮರೆಯದ ಭಾರತ ರತ್ನವು ಜನ್ಮಿಸಲಿ
ಹಿಂದುಸ್ಥಾನವು ಎಂದು ಮರೆಯದ
ಭಾರತ ರತ್ನವು ಜನ್ಮಿಸಲಿ
ಹಿಂದುಸ್ಥಾನವು ಎಂದು ಮರೆಯದ
ಭಾರತ ರತ್ನವು ಜನ್ಮಿಸಲಿ
ಈ ಕನ್ನಡ ಮಾತೆಯ ಮಡಿಲಲ್ಲಿ
ಈ ಕನ್ನಡ ನುಡಿಯ ಗುಡಿಯಲ್ಲಿ
ಹಿಂದುಸ್ಥಾನವು ಎಂದು ಮರೆಯದ,
ಭಾರತ ರತ್ನವು ಜನ್ಮಿಸಲಿ
ದೇಶ ಭಕ್ತಿಯಾ ಬಿಸಿ ಬಿಸಿ ನೆತ್ತರು
ಧಮನಿಯಲಿ ತುಂಬಿರಲಿ
ದೇಶ ಭಕ್ತಿಯ ಬಿಸಿ ಬಿಸಿ ನೆತ್ತರು
ಧಮನಿ ಧಮನಿಯಲಿ ತುಂಬಿರಲಿ
ವಿಶ್ವ ಪ್ರ ಮದಾ ಶಾಂತಿ ಮಂತ್ರದ
ಘೋಷಣೆ ಎಲ್ಲೆಡೆ ಮೊಳಗಿಸಲಿ
ಸಕಲ ಧರ್ಮದ ಸತ್ವ ಸಮನ್ವಯ ಸತ್ಯ
ಜೋತಿಯ ಬೆಳಗಿಸಲಿ
ಹಿಂದುಸ್ಥಾನವು ಎಂದು ಮರೆಯದ ಭಾರತ ರತ್ನವು ಜನ್ಮಿಸಲಿ
ಕನ್ನಡ ತಾಯಿಯ ಕೋಮಲ ಹೃದಯದ ಭವ್ಯ ಶಾಸನ ಬರೆಯಲಿ
ಕನ್ನಡ ತಾಯಿಯ ಕೋಮಲ ಹೃದಯದ ಭವ್ಯ ಶಾಸನ ಬರೆಯಲಿ
ಕನ್ನಡ ನಾಡಿನ ಎದೆಯ ಎದೆಯಲ್ಲೂ
ಕನ್ನಡ ವಾಣಿ ಸ್ಥಾಪಿಸಲಿ ಈ ಮಣ್ಣಿನ ಪುಣ್ಯದ ದಿವ್ಯ ಚರಿತ್ರೆಯ ಕಲ್ಲು ಕಲ್ಲಿನಲ್ಲಿ ಕೆತ್ತಿಸಲಿ
ಹಿಂದುಸ್ಥಾನವು ಎಂದು ಮರೆಯದ ಭಾರತ ರತ್ನವು ಜನ್ಮಿಸಲಿ
ಈ ಕನ್ನಡ ಮಾತೆಯ ಮಡಿಲಲ್ಲಿ
ಈ ಕನ್ನಡ ನುಡಿಯ ಗುಡಿಯಲ್ಲಿ ಹಿಂದುಸ್ಥಾನವು ಎಂದು ಮರೆಯದ ಭಾರತ ರತ್ನವು
ಜನ್ಮಿಸಲಿ
ಹಚ್ಚೇವು ಕನ್ನಡದ ದೀಪ…
– ಡಿ. ಎಸ್. ಕರ್ಕಿ
ಹಚ್ಚೇವು ಕನ್ನಡದ ದೀಪ ||
ಕರುನಾಡ ದೀಪ ಸಿರಿನುಡಿಯ ದೀಪ ಒಲವೆತ್ತಿ ತೋರುವಾ ದೀಪ
ಬಹುದಿನಗಳಿಂದ ಮೈ ಮರೆವೆಯಿಂದ ಕೂಡಿರುವ ಕೊಳೆಯ ಕೊಚ್ಚೇವು
ಎಲ್ಲಿಲ್ಲಿ ಕನ್ನಡದ ಕಂಪು ಸೂಸಲು ಅಲ್ಲಲ್ಲಿ ಕರಣ ಚಾಚೇವು
ನಡು ನಾಡೆ ಇರಲಿ ಗಡಿನಾಡೆ ಇರಲಿ ಕನ್ನಡದ ಕಳೆಯ ಕೆಚ್ಚೇವು
ಮರೆತೇವು ಮರೆವ ತೆರೆದೇವು ಮನವ ಎರೆದೇವು ಒಲವ ಹಿಡಿ ನೆನಪ
ನರ ನರವನೆಲ್ಲಾ ಹುರಿಗುಳಿಸಿ ಹೊಸೆದು
ಕಲ್ಪನೆಯ ಕಣ್ಣು ಹರಿವನಕ ಸಾಲು ದೀಪಗಳ ಬೆಳಕ ಬೀರೇವು
ಹಚ್ಚಿರುವ ದೀಪದಲಿ ತಾಯ ರೂಪ ಅಚ್ಚಳಿಯದಂತೆ ತೋರೇವು
ಒಡಲೊಡಲ ಕೆಚ್ಚಿನ ಕಿಡಿಗಳನ್ನು ಗಡಿ ನಾಡಿನಾಚೆ ತೂರೇವು
ಹೊಮ್ಮಿರಲು ಪ್ರೀತಿ ಎಲ್ಲಿಯದು ಭೀತಿ ನಾಡೊಲವೆ ನೀತಿ ಹಿಡಿ ನೆನಪ
ಮನೆ ಮನೆಗಳಲ್ಲಿ ಮನ ಮನಗಳಲ್ಲಿ
ನಮ್ಮವರು ಗಳಿಸಿದ ಹೆಸರುಳಿಸಲು ಎಲ್ಲಾರು ಒಂದು ಗೂಡೇವು
ನಮ್ಮೆದೆಯ ಮಿಡಿಯುವೀ ಮಾತಿನಲ್ಲಿ ಮಾತೆಯನು ಪೂಜೆ ಮಾಡೇವು
ನಮ್ಮುಸಿರು ತೀಡುವೀ ನಾಡಿನಲ್ಲಿ ಮಾಂಗಲ್ಯ ಗೀತ ಹಾಡೇವು
ತೊರೆದೇವು ಮರುಳ ಕಡೆದೇವು ಇರುಳ ಪಡೆದೇವು ತಿರುಳ ಹಿಡಿ ನೆನಪ
ಕರುಳೆಂಬ ಕುಡಿಗೆ ಮಿಂಚನ್ನೆ ಮುಡಿಸಿ
ಇದೇ ನಾಡು ಇದೇ ಭಾಷೆ…
– ಚಿ. ಉದಯಶಂಕರ್
ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೇ ನಮ್ಮ ಉಸಿರಲ್ಲಿ ||
ಕರುನಾಡು ಸ್ವರ್ಗದ ಸೀಮೆ ಕಾವೇರಿ ಹುಟ್ಟಿದ ನಾಡು
ಕಲ್ಲಲ್ಲಿ ಕಲೆಯನು ಕಂಡ ಬೇಲೂರ ಶಿಲ್ಪದ ಬೀಡು
ಬಸವೇಶ್ವರ ರನ್ನ ಪಂಪರ ಕವಿ ವಾಣಿಯ ನಾಡು
ಚಾಮುಂಡಿ ರಕ್ಷೆಯು ನಮಗೆ ಗೊಮಟೇಶ ಕಾವಲು ಇಲ್ಲಿ
ಶ್ರಿಂಗೇರಿ ಶಾರದೆ ವೀಣೆ ರಸ ತುಂಗೆ ಆಗಿದೆ ಇಲ್ಲಿ
ವಿಶ್ವಖ್ಯಾತಿಯ ವಿಶ್ವೇಶ್ವರಯ್ಯ ಜನಿಸಿದ ಈ ನಾಡು
ಏಳೇಳು ಜನ್ಮವೆ ಬರಲಿ ಈ ಮಣ್ಣಲಿ ನಾನು ಹುಟ್ಟುವೆ
ಏನೇನು ಕಷ್ಟವೆ ಇರಲಿ ಸಿರಿಗನ್ನಡ ತಾಯ್ಗೆ ದುಡಿಯುವೆ
ತನು ಕನ್ನಡ ನುಡಿ ಕನ್ನಡ ಮನ ಕನ್ನಡವಾಗಿರಲಿ
ವಿಶ್ವ ವಿನೂತನ…
– ಚೆನ್ನವೀರ ಕಣವಿ
ವಿಶ್ವ ವಿನೂತನ ವಿದ್ಯಾ ಚೇತನ
ಸರ್ವ ಹೃದಯ ಸಂಸ್ಕಾರಿ, ಜಯ ಭಾರತಿ ||
ಕರುನಾಡ ಸರಸ್ವತಿ ಗುಡಿ ಗೋಪುರ ಸುರ ಶಿಲ್ಪಿ ಕಲಾಕೃತಿ
ಕೃಷ್ಣೆ ತುಂಗೆ ಕಾವೇರಿ ಪರಿತ್ರಿತ ಕ್ಷೇತ್ರ ಮನೋಹಾರಿ
ಗಂಗ ಕದಂಬ ರಾಷ್ಟ್ರಕೂಟ ಬಲ ಚಾಲುಕ್ಯ ಹೊಯ್ಸಳ ಬಲ್ಲಾಳ
ಹಕ್ಕ ಬುಕ್ಕ ಪುಲಕೇಶಿ ವಿಕ್ರಮರ ಚೆನ್ನಮ್ಮಾಜಿಯ ವೀರಶ್ರೀ
ತ್ಯಾಗ ಭೋಗ ಸಮಯೋಗದ ದೃಷ್ಟಿ ಬೆಳವುಳ ಮಲೆಕರೆ ಸುಂದರ ಶೃಷ್ಟಿ
ಗ್ಯಾನದ ವಿಜ್ಞಾನದ ಕಲೆ ಐಸಿರಿ ಸಾರೋದಯ ಧಾರಾ ನಗರಿ
ಅರಿವೇ ಗುರುನುಡಿ ಜ್ಯೋತಿರ್ಲಿಂಗ ದಯವೇ ಧರ್ಮದ ಮೂಲ ತರಂಗ
ವಿಶ್ವ ಭಾರತಿಗೆ ಕನ್ನಡದಾರತಿ ಮೊಳಗಲಿ ಮಂಗಳ ಜಯಬೇರಿ
ನಿತ್ಯೋತ್ಸವ
ಕೆ. ಎಸ್. ನಿಸಾರ್ ಅಹಮದ್
ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ,
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ,
ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ…
ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ,
ಗತ ಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ,
ಓಲೆ ಗರಿಯ ಸಿರಿಗಳಲ್ಲಿ, ದೇಗುಲಗಳ ಭಿತ್ತಿಗಳಲಿ
ನಿತ್ಯೋತ್ಸವ ತಾಯಿ, ನಿತ್ಯೋತ್ಸವ ನಿನಗೆ….
ಹಲವೆನ್ನದ ಹಿರಿಮೆಯೆ, ಕುಲವೆನ್ನದ ಗರಿಮೆಯೆ,
ಸದ್ವಿಕಾಸಶೀಲ ನುಡಿಯ ಲೋಕಾವೃತ ಸೀಮೆಯೆ,
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ
You can download Desha Bhakthi Geethegalu in Kannada PDF by using the following download button.